ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ರನ್ನು ಬಲೂಚಿಸ್ತಾನ ಪ್ರಾಂತ್ಯದಿಂದ ಬಂಧಿಸಿರುವುದಾಗಿ ಪಾಕಿಸ್ತಾನ ಹೇಳುತ್ತಿದ್ದು, ಗೂಢಾಚಾರಿಕೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಗಲ್ಲು ಶಿಕ್ಷೆ ವಿಧಿಸಿದೆ. ಪಾಕಿಸ್ತಾನ ಕುಲಭೂಷಣ್ ಜಾಧವ್ ಗೆ ಗಲ್ಲು ಶಿಕ್ಷೆ ವಿಧಿಸಿರುವುದನ್ನು ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ ಭಾರತ, ಗಲ್ಲು ಶಿಕ್ಷೆಗೆ ತಡೆ ತರುವುದರಲ್ಲಿ ಯಶಸ್ವಿಯಾಗಿತ್ತು.