ಪಂಜಾಬ್ ನಲ್ಲಿ ಭತ್ತದ ಬೆಳೆಯ ತ್ಯಾಜ್ಯವನ್ನು ಸುಡುತ್ತಿರುವುದರಿಂದ ಉಂಟಾಗುತ್ತಿರುವ ಹೊಗೆ ದೆಹಲಿಯ ಮೇಲೂ ಪರಿಣಾಮ ಬೀರಿದ್ದು, ದಟ್ಟ ಮಂಜು ಆವರಿಸಿದೆ. ಈ ಹಿನ್ನೆಲೆಯಲ್ಲಿ ಅಮರಿಂದರ್ ಸಿಂಗ್ ಗೆ ಟ್ವೀಟ್ ಮಾಡಿದ್ದ ಅರವಿಂದ್ ಕೇಜ್ರಿವಾಲ್ ಹೊಗೆಯನ್ನು ತಡೆಗಟ್ಟುವುದಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಹಲವು ದಿನಗಳಿಂದ ಸಮಯಾವಕಾಶ ಕೇಳುತ್ತಿದ್ದೇನೆ ಎಂದಿದ್ದರು. ಅಷ್ಟೇ ಅಲ್ಲದೇ ಪಂಜಾಬ್ ಸಿಎಂ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು. ಕೇಜ್ರಿವಾಲ್ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ್ದ ಅಮರಿಂದರ್ ಸಿಂಗ್, ಈ ವಿಷಯದಲ್ಲಿ ತಾವು ಅಸಹಾಯಕರಾಗಿದ್ದು, ಕೇಂದ್ರದಿಂದಲೇ ಪರಿಹಾರ ಸಿಗಬೇಕಿದೆ ಎಂದಿದ್ದರು.