ಉದ್ರಿಕ್ತರನ್ನು ಕಂಡು ಹೆದರಿದ ನಿವಾಸಿಗಳು ಅಲ್ಲಿಂದ ಓಡಿಹೋಗಿದ್ದಾರೆ. ನಂತರ ಉದ್ರಿಕ್ತರು ಹಿಂದುಗಳ ಮನೆಗಳಿಗೆ ನುಗ್ಗಿ ಲೂಟಿ ಮಾಡಿ ಬೆಂಕಿ ಹಾಕಿ ಸುಟ್ಟಿದ್ದಾರೆ. ಇದರಿಂದಾಗಿ 30ಕ್ಕೂ ಹೆಚ್ಚು ಮನೆಗಳು ಭಸ್ಮವಾಗಿವೆ. ಮನೆಮಠ ಕಳೆದುಕೊಂಡ ಹಿಂದೂಗಳಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ.