ಮಗನ ವರ್ತನೆಯಿಂದ ನೊಂದು ತನ್ನ ನಂತರ ತನ್ನ ಭೂಗತ ಸಾಮ್ರಾಜ್ಯವನ್ನು ಯಾರು ನೋಡಿಕೊಳ್ಳುತ್ತಾರೆ ಎಂಬ ಖಿನ್ನತೆಗೆ ಒಳಗಾಗಿದ್ದಾನೆ ಎಂದು ಇಕ್ಬಾಲ್ ಇಬ್ರಾಹಿಂ ಕಸ್ಕರ್ ಅಧಿಕಾರಿಗಳಿಗೆ ತಿಳಿಸಿದ್ದಾನೆ. ತನ್ನ ಸಹೋದರರ ಪೈಕಿ ಕೆಲವರು ಮೃತಪಟ್ಟಿದ್ದಾರೆ, ಅನೀಸ್ ಇಬ್ರಾಹಿಂ ಕಸ್ಕರ್ ಗೆ ವಯಸ್ಸಾಗಿದೆ ಹಾಗೂ ಹತ್ತಿರದ ಸಂಬಂಧಿಗಳ ಬಗ್ಗೆ ದಾವೂದ್ ಗೆ ವಿಶ್ವಾಸವಿಲ್ಲ ಎಂದು ತಿಳಿದುಬಂದಿದೆ.