ಪಾಕಿಸ್ತಾನ ಭಯೋತ್ಪಾದನೆ ನಿಗ್ರಹ ಇಲಾಖೆ (ಸಿಟಿಡಿ) ಅಧಿಕಾರಿಗಳು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ರವಿ ನದಿ ಬಳಿ 8-10 ಉಗ್ರರು ತಮ್ಮ ಚಟುವಟಿಕೆಗಳನ್ನು ನಡೆಸುತ್ತಿದ್ದು, ಮೊಹರಂ ಮೆರವಣಿಗೆ ವೇಳೆ ದಾಳಿ ನಡೆಸಲು ಸಂಚು ರೂಪಿಸಿದ್ದಾರೆಂದು ಗುಪ್ತಚರಗಳಿಂದ ಮಾಹಿತಿ ತಿಳಿದುಬಂದಿತ್ತು. ಈ ಹಿನ್ನಲೆಯಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿ 5 ತಾಲಿಬಾನ್ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಿದ್ದಾರೆ.