ಮಂಗಳವಾರ ಅಮೆರಿಕದ ಕ್ಯಾಲಿಫೋರ್ನಿಯಾದ ಪ್ರತಿಷ್ಠಿತ ಬರ್ಕ್ ಲೇ ವಿಶ್ವವಿದ್ಯಾಲಯದಲ್ಲಿ ‘ಪ್ರಚಲಿತ ಭಾರತ ಮತ್ತು ವಿಶ್ವದ ಅತಿ ದೊಡ್ಡ ಪ್ರಜಾಸತ್ತಾತ್ಮಕ ರಾಷ್ಟ್ರದ ಮುಂದಿನ ಹಾದಿ’ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಅವರು, "ದ್ವೇಷ, ಕೋಪ ಮತ್ತು ಹಿಂಸೆಯು ನಮ್ಮನ್ನು ಹಾಳುಮಾಡುತ್ತದೆ. ದೇಶದ ರಾಜಕೀಯ ವ್ಯವಸ್ಥೆಯಲ್ಲಿ ಸಾಕಷ್ಟು ತಪ್ಪುಗಳು ನುಸುಳಿದ್ದು, ಈ ವಿಚಾರವನ್ನು ದೇಶದ ಪ್ರತೀಯೊಬ್ಬ ಪ್ರಜೆಯೂ ತಿಳಿದಿದ್ದಾನೆ. ಪ್ರಶ್ನೆ ಮಾಡುವ ವಿಚಾರವಾದಿ ಪತ್ರಕರ್ತರನ್ನು ಕೊಲ್ಲಲಾಗುತ್ತಿದೆ. ಇದೇ ಹಿಂಸಾಚಾರ ನಮ್ಮ ಅಜ್ಜಿ ಹಾಗೂ ತಂದೆಯನ್ನು ಬಲಿ ಪಡೆದಿತ್ತು. ಆದರೆ ಈ ಹಿಂಸಾಚಾರದಿಂದ ಹಿಂಸಾಚಾರ ಹೆಚ್ಚಾಗುತ್ತದೆಯೇ ಹೊರತು ನ್ಯಾಯ ಸಿಗುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.