ಆಗಸ್ಟ್ 25ರಂದು ಆರಂಭಗೊಂಡ ಹಿಂಸಾಚಾರದ ನಂತರ ಮ್ಯಾನ್ಮಾರ್ ನಿಂದ 3,79,000 ರೋಹಿಂಗ್ಯ ಮುಸ್ಲಿಂರು ಬಾಂಗ್ಲಾದೇಶದಲ್ಲಿ ನೆಲೆಸಿದ್ದು ಕಳೆದ ರಾತ್ರಿ ಕರೆ ಮಾಡಿದ ಸುಷ್ಮಾ ಸ್ವರಾಜ್ ಅವರು ಬಾಂಗ್ಲಾದೇಶಕ್ಕೆ ಬೆಂಬಲ ಸೂಚಿಸಿದ್ದಾರೆ. ಜತೆಗೆ ನಿರಾಶ್ರಿತರನ್ನು ಕೂಡಲೇ ಹಿಂಪಡೆಯುವಂತೆ ಮ್ಯಾನ್ಮಾರ್ ಮೇಲೆ ಒತ್ತಡ ಹಾಕುತ್ತಿರುವುದಾಗಿ ತಿಳಿಸಿದ್ದಾರೆ ಎಂದು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರ ಉಪ ಪ್ರೆಸ್ ಕಾರ್ಯದರ್ಶಿ ನಜ್ರುಲ್ ಇಸ್ಲಾಂ ಅವರು ಸುದ್ದಿ ಸಂಸ್ಧೆಯೊಂದಕ್ಕೆ ತಿಳಿಸಿದ್ದಾರೆ.