ಈ ಬಗ್ಗೆ ಸ್ವತಃ ಯುಎಇ ಅದ್ಯಕ್ಷರಾದ ಶೇಖ್ ಖಲೀಫಾ ಅವರು ಪ್ರತಿಕ್ರಿಯಿಸಿದ್ದು, ಕೂಡಲೇ ಕೇರಳ ನಿರಾಶ್ರಿತರಿಗೆ ನೆರವು ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಅಲ್ಲದೆ ಈ ಸಂಬಂಧ ಸಮಿತಿಯೊಂದನ್ನು ರಚನೆ ಮಾಡುವಂತೆಯೂ ಸೂಚಿಸಿದ್ದಾರೆ ಎನ್ನಲವಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಯುಎಇ ಉಪಾಧ್ಯಕ್ಷ ಶೇಖ್ ಮೊಹಮದ್ ಬಿನ್ ರಷೀದ್ ಅಲ್ ಮಕ್ತೌಮ್ ಅವರು, ಕೇರಳಕ್ಕೆ ಸಂಬಂಧಿಸಿದಂತೆ ನಮ್ಮ ರಾಷ್ಟ್ರ ವಿಶೇಷ ಕಾಳಜಿ ಹೊಂದಿದೆ. ಪ್ರವಾಹ ಪೀಡಿತ ಕೇರಳ ಸಂಕಷ್ಟದಲ್ಲಿದ್ದು, ನೆರವು ನಮ್ಮ ಕರ್ತವ್ಯ. ಕೇರಳ ನಮ್ಮ ಯಶಸ್ಸಿನ ಮೂಲ ಎಂದು ಅವರು ಹೇಳಿದ್ದಾರೆ.