ಪಾಕಿಸ್ತಾನದ ಹೊಸ ಸರ್ಕಾರ ಉಗ್ರ ಮುಕ್ತ ವಾತಾವರಣವನ್ನು ನಿರ್ಮಿಸುತ್ತದೆ ಎಂದು ಭಾವಿಸುತ್ತೇವೆ: ಭಾರತ

ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ನೇತೃತ್ವದ ಹೊಸ ಸರ್ಕಾರ ದಕ್ಷಿಣ ಏಷ್ಯಾ ಪ್ರದೇಶವನ್ನು ...
ಸೈಯದ್ ಅಕ್ಬರುದ್ದೀನ್
ಸೈಯದ್ ಅಕ್ಬರುದ್ದೀನ್

ನ್ಯೂಯಾರ್ಕ್: ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ನೇತೃತ್ವದ ಹೊಸ ಸರ್ಕಾರ ದಕ್ಷಿಣ ಏಷ್ಯಾ ಪ್ರದೇಶವನ್ನು ಉಗ್ರಮುಕ್ತಗೊಳಿಸುವಲ್ಲಿ ಕಾರ್ಯನಿರತವಾಗುತ್ತದೆ ಎಂದು ಆಶಾಭಾವನೆ ಹೊಂದಿದ್ದೇವೆ ಎಂದು ಭಾರತ ಹೇಳಿದೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಮಾತನಾಡಿದ ಭಾರತದ ಶಾಶ್ವತ ಪ್ರತಿನಿಧಿ ಸೈಯದ್ ಅಕ್ಬರುದ್ದೀನ್, ಪಾಕಿಸ್ತಾನದ ಹೊಸ ಸರ್ಕಾರ ವಾದ ವಿವಾದಗಳಲ್ಲಿ ತೊಡಗದೆ ಸುರಕ್ಷಿತ, ಸ್ಥಿರ ಮತ್ತು ಅಭಿವೃದ್ಧಿಪರ, ಉಗ್ರ ಮತ್ತು ಹಿಂಸಾಚಾರ ಮುಕ್ತ ದಕ್ಷಿಣ ಏಷ್ಯಾ ಪ್ರಾಂತ್ಯವನ್ನು ನಿರ್ಮಿಸುವತ್ತ ಗಮನ ಹರಿಸಲಿದೆ ಎಂದು ಭಾವಿಸುತ್ತೇವೆ ಎಂದಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಣ ವಿವಾದಭರಿತ ಪ್ರಾಂತ್ಯಗಳ ಕುರಿತು ಪಾಕಿಸ್ತಾನ ಪದೇಪದೇ ಉಲ್ಲೇಖ ಮಾಡುತ್ತಿರುವ ಬಗ್ಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಮಾತನಾಡಿದ ಅಕ್ಬರುದ್ದೀನ್, ಪ್ರತ್ಯೇಕ ನಿಯೋಗ ಭಾರತದ ಆಂತರಿಕ ಭಾಗವನ್ನು ಉಲ್ಲೇಖ ಮಾಡುತ್ತಿದೆ ಎಂದು ಕಠುವಾಗಿ ಪಾಕಿಸ್ತಾನಕ್ಕೆ ತಿರುಗೇಟು ನೀಡಿದ್ದಾರೆ.


ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com