ಪ್ರಧಾನಿಯಾದ ನಂತರ ಎರಡನೇ ಬಾರಿಗೆ ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ನಿನ್ನೆ ತೆರಳಿದ ಪ್ರಧಾನಿ ಮೋದಿ ಇಂದು ಅಬುದಾಬಿಯಲ್ಲಿ ಮೊದಲ ಹಿಂದೂ ದೇವಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.ನಂತರ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿ, ಭಾರತ ಇಂದು ನಿರಾಶಾವಾದದ ಹಂತವನ್ನು ದಾಟಿ ಹೋಗಿದೆ. ಇದು ಸಾಧ್ಯವೇ ಎಂಬ ಮನಸ್ಥಿತಿಯಿಂದ ಇಂದು ಭಾರತೀಯರು ಹೊರಬಂದು ಮೋದಿಯವರೇ ಯಾವಾಗ ಇದು ಆಗುತ್ತದೆ ಎಂದು ಕೇಳುವ ಸ್ಥಿತಿಗೆ ಬಂದಿದ್ದಾರೆ. ಇದು ಆಗುವುದಿದ್ದರೆ ಈಗಲೇ ಆಗುತ್ತದೆ ಎಂಬ ಹೊಸ ನಂಬಿಕೆ ಜನರಲ್ಲಿ ಮೂಡಿದೆ ಎಂದು ಹೇಳಿದರು.