ಸೋಮವಾರ ಕರಾಚಿಯಲ್ಲಿ ನಡೆದ ಸಾಹಿತ್ಯ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿರುವ ಮಣಿ ಶಂಕರ್ ಅಯ್ಯರ್ ಅವರು ಜಿಯೋ ನ್ಯೂಸ್ ನೊಂದಿಗೆ ಮಾತನಾಡಿ, ಪಾಕಿಸ್ತಾನ ಮತ್ತು ಭಾರತ ನಡುವಿನ ಸಮಸ್ಯೆ ಇತ್ಯರ್ಥಕ್ಕೆ ಒಂದೇ ಒಂದು ಮಾರ್ಗವಿದೆ. ಅದು ಪರಸ್ಪರರ ಚರ್ಚೆ. ಉಭಯ ರಾಷ್ಟ್ರಗಳ ನಡುವೆ ನಿರಂತರ ಮತ್ತು ಅಡ್ಡಿ ರಹಿತ ಮಾತುಕತೆಯಿಂದ ಮಾತ್ರ ಸಮಸ್ಯೆ ಇತ್ಯರ್ಥವಾಗಲಿದ್ದು, ಈ ಬಗ್ಗೆ ಪಾಕಿಸ್ತಾನದ ಪ್ರಯತ್ನವನ್ನು ನಾನು ಶ್ಲಾಘಿಸುತ್ತೇನೆ. ಭಾರತದೊಂದಿಗೆ ಪಾಕಿಸ್ತಾನ ಮತ್ತೆ ದ್ವಿಪಕ್ಷೀಯ ಮಾತುಕತೆಗೆ ಉತ್ಸುಕವಾಗಿದ್ದು, ಅದೇ ಉತ್ಸುಕತೆ ಭಾರತ ತೋರಿಸುತ್ತಿಲ್ಲ ಎಂದು ಪರೋಕ್ಷವಾಗಿ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದರು.