ನೌಕಾಪಡೆಯ ಗಸ್ತು ದೋಣಿಗಳು ಸ್ಥಳಕ್ಕೆ ತೆರಳಿ ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ. ಪ್ರಸ್ತುತ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರಾವಳಿಯ ಹೆದ್ದಾರಿ ಇದಾಗಿದ್ದು, ಈ ಹೆದ್ದಾರಿಯಲ್ಲಿ ಬಸ್ ಮತ್ತು ಟ್ರಕ್ ಗಳು ಮಾತ್ರ ಸಂಚರಿಸುತ್ತವೆ ಎಂದು ತಿಳಿದುಬಂದಿದೆ.