ಶುಕ್ರವಾರ ಭಾರತದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ನೀಡಿದ್ದ ಹೇಳಿಕೆಯನ್ನು ಹಿನ್ನಲೆಯಾಗಿಟ್ಟುಕೊಂಡು ಮಾತಾನಾಡಿದ ಪಾಕಿಸ್ತಾನ ವಿದೇಶಾಂಗ ಸಚಿವ ಖ್ವಾಜಾ ಮಹಮದ್ ಆಸಿಫ್ ಅವರು, ನಮ್ಮ ಸಾಮರ್ಥ್ಯ ಪ್ರದರ್ಶನಕ್ಕೆ ಆಹ್ವಾನ ಬೇಡ ಎಂದು ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು, ಭಾರತ ಸರ್ಕಾರ ಒಪ್ಪಿದರೆ ಅಣ್ವಸ್ತ್ರ ದಾಳಿ ಸಹಿತ ಪಾಕಿಸ್ತಾನದ ಯಾವುದೇ ರೀತಿಯ ಬೆದರಿಕೆಗಳನ್ನು ಹಿಮ್ಮೆಟ್ಟಿಸಲು ನಾವು ಸಿದ್ಧ ಎಂದು ಹೇಳಿದ್ದರು.