ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಪಾಕಿಸ್ತಾನ ಕುಲಭೂಷಣ್ ಜಾದವ್ ಪ್ರಕರಣವನ್ನು ಪ್ರಸ್ತಾಪಿಸಿದ್ದು, ಪಾಕಿಸ್ತಾನದ ನಿಲುವಿನ ಕುರಿತು ಮಾತನಾಡುವ ದೇಶಗಳು ಮೊದಲು ತಮ್ಮ ನಿಲುವಿನ ಕುರಿತು ಆಲೋಚಿಸಬೇಕಿದೆ ಎಂದು ಭಾರತಕ್ಕೆ ಟಾಂಗ್ ನೀಡಿದೆ. ಈ ಬಗ್ಗೆ ಮಾತನಾಡಿರುವ ಪಾಕಿಸ್ತಾನದ ಖಾಯಂ ಪ್ರತಿನಿಧಿ ಮಲಿಹಾ ಲೋಧಿ, ಪಾಕಿಸ್ತಾನದ ನಡೆಗಳನ್ನು ಟೀಕಿಸುವ ದೇಶಗಳು ಮೊದಲು ತಮ್ಮ ದೇಶದ ನೀತಿಗಳನ್ನು ಪರಿಶೀಲಿಸಿಕೊಳ್ಳಬೇಕಿದೆ. ನಮ್ಮ ದೇಶದ ವಿರುದ್ಧ ಬೇಹುಗಾರಿಕೆ ನಡೆಸುತ್ತಿದ್ದ ಕುಲಭೂಷಣ್ ಜಾದವ್ ರನ್ನು ನಾವು ಬಂಧಿಸಿದ್ದೇವೆ ಎಂದು ಹೇಳಿದ್ದಾರೆ.