ಇಸ್ಲಾಮಾಬಾದ್: ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ, ನಾಗರೀಕ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವ ಪಾಕಿಸ್ತಾನ, ಇದೀಗ ತನ್ನದೇನೂ ತಪ್ಪಿಲ್ಲ ಎಂಬಂತೆ ವರ್ತಿಸತೊಡಗಿದ್ದು, ಗಡಿಯಲ್ಲಿ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪಿಸಿ, ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿಗೆ ಭಾನುವಾರ ಸಮನ್ಸ್ ಜಾರಿ ಮಾಡಿದೆ.