ಸ್ವಿಟ್ಜರ್ಲೆಂಡ್ ನ ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ 'ವಿಶ್ವದಲ್ಲಿ ಭಾರತದ ಪಾತ್ರ' ಎಂಬ ವಿಚಾರದ ಕುರಿತು ಮಾತನಾಡಿದ ಸುರೇಶ್ ಪ್ರಭು, ಪ್ರಸ್ತುತ ಭಾರತದಲ್ಲಿರುವ ಸರ್ಕಾರದ ಅವಧಿಯಲ್ಲಿ ಧರ್ಮಾಧಾರಿತ ತಾರತಮ್ಯಕ್ಕೆ ಅವಕಾಶವಿಲ್ಲ. ಒಂದು ವೇಳೆ ಇಂತಹ ತಾರತಮ್ಯವಿದ್ದಿದ್ದರೆ, ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದ ತ್ರಿವಳಿ ತಲಾಖ್ ಮಸೂದೆ ಮಂಡನೆಯಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ.