ತಡರಾತ್ರಿಯವರೆಗೆ ಕಾರ್ಯಾಚರಣೆ ನಡೆಸಿ ನಾಲ್ಕು ಬಾಲಕರನ್ನು ರಕ್ಷಿಸಲಾಗಿತ್ತು. ನಂತರ ಗುಹೆಯಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡಚಣೆ ಉಂಟಾಗಿ ತಾತ್ಕಾಲಿಕ ಸ್ಥಗಿತಗೊಳಿಸಲಾಗಿತ್ತು. ಇಂದು ಮತ್ತೆ ಕಾರ್ಯಾಚರಣೆ ಆರಂಭಿಸಿ ನಾಲ್ವರನ್ನು ರಕ್ಷಿಸಲಾಗಿದೆ. ಥಾಯ್ ನೌಕಾಪಡೆ ಶೀಘ್ರದಲ್ಲೇ ಇತರೆ ಬಾಲಕರನ್ನು ರಕ್ಷಿಸುವ ವಿಶ್ವಾಸ ವ್ಯಕ್ತಪಡಿಸಿದೆ.