ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಗಳಲ್ಲಿ ಒಬ್ಬನಾಗಿರುವ ಅಬ್ದುಲ್ ರೆಹ್ಮಾನ್ ಮಕ್ಕಿ ಗೆ ಕೋರ್ಸ್ ನ ಜವಾಬ್ದಾರಿ ನೀಡಲಾಗಿದೆ. ಚೀನಾ-ಪಾಕಿಸ್ತಾನ ಎಕಾನಾಮಿಕ್ ಕಾರಿಡಾರ್ ಯೋಜನೆಯಲ್ಲಿ ಕೆಲಸ ಗಿಟ್ಟಿಸುವ ಉದ್ದೇಶದಿಂದ ಹಾಗೂ ಬರುವ ವೇತನದಲ್ಲಿ ಒಂದಷ್ಟು ಭಾಗವನ್ನು ಭಾರತದ ಮೇಲೆ ದಾಳಿ ನಡೆಸಲು ಸಹಕಾರಿಯಗುವಂತೆ ಉಗ್ರ ಸಂಘಟನೆಗೆ ನೀಡುವುದು ಕೋರ್ಸ್ ನ ಮೂಲ ಉದ್ದೇಶವಾಗಿದೆ. ಸುಮಾರು 300 ಜನ ಇಂಜಿನಿಯರ್ ಗಳಿಗೆ ಚೀನಾ-ಪಾಕಿಸ್ತಾನ ಎಕಾನಾಮಿಕ್ ಕಾರಿಡಾರ್ ಯೋಜನೆಯಲ್ಲಿ ಕೆಲಸ ಪಡೆಯುವಂತೆ ಸೂಚಿಸಲಾಗಿದೆ.