ಜನಾಂಗ, ವರ್ಣ, ಧರ್ಮ ಮತ್ತು ರಾಷ್ಟ್ರೀಯತೆಗೆ ಸಂಬಂಧಿಸಿದಂತೆ ಕೂಗಾಡಿದ್ದ ಆ್ಯಡಂ ಪುರಿಟನ್, ಹೈದರಾಬಾದ್ ಮೂಲದ ಟೆಕ್ಕಿ ಶ್ರೀನಿವಾಸ ಕುಚಿಬೋಟ್ಲಾ ಅವರನ್ನು 2017ರ ಫೆಬ್ರವರಿ 22 ರಂದು ಕನ್ಸಾಸ್ ನಗರದ ಆಸ್ಟಿನ್ ಬಾರ್ ನಲ್ಲಿ ಗುಂಡಿಟ್ಟು ಹತ್ಯೆ ಮಾಡಿದ್ದ. ಈ ವೇಳೆ ಶ್ರೀನಿವಾಸ್ ಅವರ ರಕ್ಷಣೆಗೆ ಮುಂದಾಗಿದ್ದ ವರಂಗಲ್ ಮೂಲದ ಅಕೋಲ್ ಮೇಡಸಾನಿ ಅವರ ಮೇಲೂ ಗುಂಡಿನ ದಾಳಿ ನಡೆಸಿದ್ದ, ಪರಿಣಾಮ ಮೇಡಸಾನಿಯವರು ತೀವ್ರವಾಗಿ ಗಾಯಗೊಂಡು, ಚಿಕಿತ್ಸೆ ಬಳಿಕ ಪ್ರಾಣಾಪಾಯದಿಂದ ಪಾರಾಗಿದ್ದರು.