ಸೇನೆಯ ಉನ್ನತ ಮಟ್ಟದ ಸಭೆಯ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಸೇನಾ ವಕ್ತಾರ ಮೇಜರ್ ಜನರಲ್ ಆಸಿಫ್ ಘಫೂರ್, ಪ್ರಧಾನಿ ಶಾಶಿಕ್ ಖಕನ್ ಅಬ್ಬಾಸಿ ಸೇನೆಯ ಉನ್ನತ ಮಟ್ಟದ ಸಭೆ ನಡೆಸಲು ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ. ಈ ಸಭೆಯಲ್ಲಿ ಮುಂಬೈ ದಾಳಿಯ ಬಗ್ಗೆ ದಾರಿ ತಪ್ಪಿಸುವ ಹೇಳಿಕೆಯ ಬಗ್ಗೆಯೂ ಚರ್ಚಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.