ಭಾರತ ಹಾಗೂ ಇಡೀ ವಿಶ್ವದಲ್ಲಿ ಸಾಕಷ್ಟು ಗುರುದ್ವಾರಗಳಿವೆ. ಆದರೆ, ಎಲ್ಲಿಯೂ ಯಾವುದೇ ರೀತಿಯ ನಿರ್ಬಂಧಗಳಿಲ್ಲ. ನಮಗೆ ಈ ರೀತಿ ಆಗುತ್ತಿರುವುದು ಇದೇ ಮೊದಲು, ಗುರುದ್ವಾರಕ್ಕೆ ತೆರಳುತ್ತಿದ್ದ ವೇಳೆ ನಮ್ಮನ್ನು ಪಾಕಿಸ್ತಾನ ಅಧಿಕಾರಿಗಳು ತಡೆಹಿಡಿದರು. ಇದು ಗುರುದ್ವಾರದ ಪಾವಿತ್ರ್ಯತೆಯನ್ನು ನಾಶ ಮಾಡಿದಂತಾಗುತ್ತದೆ. ಎಂದು ಭಾರತೀಯ ರಾಯಭಾರಿ ಅಧಿಕಾರಿಗಳು ಹೇಳಿದ್ದಾರೆ.