ಕಳೆದ ಸಾರ್ಕ್ ಶೃಂಗಸಭೆ 2014ರಲ್ಲಿ ನೇಪಾಳದ ಕಠ್ಣಂಡುವಿನಲ್ಲಿ ನಡೆದಿತ್ತು. ಈ ವೇಳೆ ಪ್ರಧಾನಿ ಮೋದಿ ಸಹ ಭಾಗವಹಿಸಿದ್ದರು. 2016ರಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿ ನಡೆಯಬೇಕಿತ್ತು. ಆದರೆ ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ಮೇಲೆ ಉಗ್ರ ದಾಳಿ ನಂತರ ಭಾರತ ಸಾರ್ಕ್ ಶೃಂಗ ಸಭೆಯನ್ನು ಬಹಿಷ್ಕರಿಸಿತ್ತು. ಭಾರತದ ನಿರ್ಧಾರಕ್ಕೆ ಸದಸ್ಯ ರಾಷ್ಟ್ರಗಳಾದ ಬಾಂಗ್ರಾದೇಶ, ಭೂತಾನ್ ಮತ್ತು ಅಘ್ಘಾನಿಸ್ತಾನ ಸಹ ಬೆಂಬಲ ಸೂಚಿಸಿದ್ದವು. ಹೀಗಾಗಿ ಪಾಕಿಸ್ತಾನದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ 19ನೇ ಸಾರ್ಕ್ ಶೃಂಗ ಸಭೆ ಮುಂದೂಡಿಕೆಯಾಗಿತ್ತು.