ಮಾತುಕತೆ ನಡೆಸೋಣ, ಯಾವುದೇ ವಿಷಯವಾಗಿಯೂ ಮಾತುಕತೆಗೆ ನಾನು ಸಿದ್ಧನಿದ್ದೇನೆ, ಕಾಶ್ಮೀರ ವಿಷಯದಲ್ಲಿ ಸೇನಾ ಪರಿಹಾರ ಸಾಧ್ಯವಿಲ್ಲ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ. ಇದೇ ವೇಳೆ ದೇಶದ ಹೊರಗೆ ಭಯೋತ್ಪಾದನೆಯನ್ನು ಹರಡಲು ಪಾಕಿಸ್ತಾನದ ನೆಲ ಬಳೆಕೆಯಾಗುತ್ತಿರುವ ಆರೋಪದ ಬಗ್ಗೆಯೂ ಮಾತನಾಡಿರುವ ಇಮ್ರಾನ್ ಖಾನ್, ಪಾಕಿಸ್ತಾನ ನೆಲವನ್ನು ಭಯೋತ್ಪಾದನೆಗಾಗಿ ಬಳಕೆ ಮಾಡಿಕೊಳ್ಳುವುದು ನೀಡುವುದು ನಮ್ಮ ಹಿತಾಸಕ್ತಿಯಲ್ಲ. ಪಾಕಿಸ್ತಾನದ ಮನಸ್ಥಿತಿ ಬದಲಾಗಿದೆ. ಪಾಕಿಸ್ತಾನದ ಜನತೆ ಭಾರತದೊಂದಿಗೆ ಶಾಂತಿ ಬಯಸುತ್ತಿದ್ದಾರೆ, ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲು ನಾನು ಸಿದ್ಧನಿದ್ದೇನೆ ಎಂದು ಇಮ್ರಾನ್ ಭಾರತೀಯ ಪತ್ರಕರ್ತರ ತಂಡದೊಂದಿಗಿನ ಸಂವಾದದಲ್ಲಿ ಹೇಳಿದ್ದಾರೆ.