ಲಂಡನ್: ರೂ.9 ಸಾವಿರ ಕೋಟಿ ಸಾಲ ಮಾಡಿ, ಭಾರತೀಯ ಬ್ಯಾಂಕುಗಳಿಗೆ ಪಂಗನಾಮ ಹಾಕಿ ವಿದೇಶದಲ್ಲಿ ಸ್ವತಂತ್ರ ಹಕ್ಕಿಯಂತೆ ಹಾರಾಡಿಕೊಂಡಿರುವ ಸಾಲದ ದೊರೆ ವಿಜಯ್ ಮಲ್ಯ ಹಸ್ತಾಂತರ ಪ್ರಕರಣದ ವಿಚಾರಣೆ ಸೋಮವಾರ ವೆಸ್ಟ್ ಮಿನ್'ಸ್ಟರ್ ನ್ಯಾಯಾಲಯದಲ್ಲಿ ನಡೆಯಲಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿ ನಿರ್ದೇಶನಾಲಯ ಭಾರತದ ಹೊಸ ಕಾನೂನಿನಂತೆ ಮಲ್ಯ ಅವರನ್ನು ದೇಸ ಭ್ರಷ್ಟ ಎಂದು ಘೋಷಣೆ ಮಾಡಿದ್ದು, ಅವರ ಎಲ್ಲಾ ಆಸ್ತಿಯನ್ನು ಮುಟ್ಟುಗೊಲು ಹಾಕಿಕೊಳ್ಳಲು ಕಾನೂನು ಕ್ರಮಗಳನ್ನು ಕೈಗೊಂಡಿದೆ.
ಈ ಹಿನ್ನಲೆಯಲ್ಲಿ ಲಂಡನ್ ನ್ಯಾಯಾಲಯದಲ್ಲಿ ಮಲ್ಯ ಅವರು ತಮ್ಮ ಹೇಳಿಕೆಯನ್ನು ದಾಖಲು ಮಾಡಿದ್ದು, ಅದಕ್ಕೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ಸಲ್ಲಿಸಿದ್ದಾರೆ.
ಈ ಸಂಬಂಧ ಇಂದು ಮಧ್ಯಾಹ್ನ ಲಂಡನ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಮದ್ಯದ ದೊರೆಯ ಹಣೆಬರಹ ಇಂದೇ ನಿರ್ಧಾರವಾಗುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.