ಯುನೈಟೆಡ್ ನೇಷನ್ಸ್: ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಸೈನಿಕರ ಅಪರಹರಣ, ಕೊಲೆ, ಪೋಲೀಸರ ಹತ್ಯೆಗಳ ಬಳಿಕ ಭಾರತ-ಪಾಕ್ ವಿದೇಶಾಂಗ ಸಚಿವರ ಮಟ್ಟದ ಮಾತುಕತೆಯನ್ನು ರದ್ದುಗೊಳಿಸಿದ ಭಾರತ ಇಂದು (ಸೋಮವಾರ) ಆರಂಭವಾಗಲಿರುವ 73ನೇ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಕಠಿಣ ನಿರ್ಧಾರದ ಕುರಿತು ಸ್ಪಷ್ಟನೆ ನೀಡುವ ನಿರೀಕ್ಷೆ ಇದೆ.