ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು: ಗಡಿ ನಿಯಂತ್ರಣ ರೇಖೆ ಸಂಬಂಧ ಪರಿಣಾಮ ಬೀರದು: ಜೈಶಂಕರ್ 

ವಿಧಿ 370 ರದ್ದು   ಭಾರತದ ಆಂತರಿಕ ವಿಚಾರವಾಗಿದ್ದು, ಗಡಿ ನಿಯಂತ್ರಣ ರೇಖೆ ಸಂಬಂಧ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಜೈಶಂಕರ್  ಹೇಳಿದ್ದಾರೆ.
ಚೀನಾದಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್
ಚೀನಾದಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್

ಬೀಜಿಂಗ್: ಚೀನಾ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಎಸ್‌.ಜೈಶಂಕರ್ ಕಾಶ್ಮೀರಕ್ಕೆ ಸಂವಿಧಾನ ವಿಧಿ 370 ರಡಿ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿರುವುದು ಭಾರತದ ಆಂತರಿಕ ವಿಚಾರವಾಗಿದ್ದು, ಗಡಿ ನಿಯಂತ್ರಣ ರೇಖೆ ಸಂಬಂಧ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.

ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗಿನ ದ್ವಿಪಕ್ಷೀಯ ಸಭೆ ವೇಳೆ ಅವರು, ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರ ರದ್ದುಪಡಿಸಿರುವ ಭಾರತ ಸರ್ಕಾರದ ಇತ್ತೀಚಿನ ಕ್ರಮದಿಂದ ಯಾವುದೇ ಅಪಾಯವಿಲ್ಲ, ಗಡಿ ರೇಖೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಚೀನಾ ಕಳವಳ ಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com