ಕಾಶ್ಮೀರ ವಿಚಾರವಾಗಿ ಪರಮಾಣು ಅಸ್ತ್ರ ಸಹಿತ ಪಾಕಿಸ್ತಾನ ಯಾವುದೇ ಹಂತಕ್ಕೂ ಹೋಗಲು ಸಿದ್ದ: ಇಮ್ರಾನ್ ಖಾನ್

ಕಾಶ್ಮೀರ ವಿಚಾರವಾಗಿ ಪರಮಾಣು ಅಸ್ತ್ರ ಸಹಿತ ಪಾಕಿಸ್ತಾನ ಯಾವುದೇ ಹಂತಕ್ಕೂ ಹೋಗಲು ಸಿದ್ದ ಎಂದು ಹೇಳುವ ಮೂಲಕ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭಾರತವನ್ನು ಬೆದರಿಸುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಇಸ್ಲಾಮಾಬಾದ್: ಕಾಶ್ಮೀರ ವಿಚಾರವಾಗಿ ಪರಮಾಣು ಅಸ್ತ್ರ ಸಹಿತ ಪಾಕಿಸ್ತಾನ ಯಾವುದೇ ಹಂತಕ್ಕೂ ಹೋಗಲು ಸಿದ್ದ ಎಂದು ಹೇಳುವ ಮೂಲಕ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭಾರತವನ್ನು ಬೆದರಿಸುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

ಅತ್ತ ಜಿ -7 ಶೃಂಗಸಭೆಯ ಹೊರತಾಗಿ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸುತ್ತಿರುವ ಬೆನ್ನಲ್ಲೇ ಇತ್ತ ಪಾಕ್ ಪ್ರಧಾನಿ ಭಾರತಕ್ಕೆ ನೇರವಾಗಿಯೇ ಪರಮಾಣು ಬೆದರಿಕೆ ಹಾಕಿದ್ದು, 'ಭಾರತ ನಮ್ಮನ್ನು ದಿವಾಳಿಯಾಗಿಸಲು ಪ್ರಯತ್ನಿಸಿದೆ ಎಂದು ಆರೋಪಿಸಿದ್ದಾರೆ. 

ಅಲ್ಲದೆ ಮತ್ತೊಮ್ಮೆ ಕಾಶ್ಮೀರದ ಬಗ್ಗೆ ಕ್ಯಾತೆ ತೆಗೆದಿರುವ ಇಮ್ರಾನ್ ಖಾನ್, ಕಾಶ್ಮೀರ ವಿಚಾರವಾಗಿ ನಿರ್ಧರಿಸುವ ಸಮಯ ಬಂದಿದ್ದು, ನಿರ್ಣಾಯಕ ತೀರ್ಮಾನ ಕೈಗೊಳ್ಳಬೇಕಿದೆ. ಕಾಶ್ಮೀರ ವಿಚಾರವಾಗಿ ಭಾರತದೊಂದಿಗೆ ಮಾತುಕತೆ ನಡೆಸಿದಾಗ ಭಯೋತ್ಪಾದನೆ ಬಗ್ಗೆ ಆರೋಪ ಮಾಡಿತು. ಭಯೋತ್ಪಾದನೆ ಹರಡಿದೆ ಎಂದು ನಮ್ಮ ಮೇಲೆ ಆರೋಪ ಹೊರಿಸಲು ಭಾರತವು ಅವಕಾಶವನ್ನು ಹುಡುಕುತ್ತಲೇ ಇದೆ. ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವ ಮೂಲಕ ಭಾರತ ದೊಡ್ಡ ತಪ್ಪು ಮಾಡಿದೆ. ಕಾಶ್ಮೀರ ವಿಚಾರವಾಗಿ ಪರಮಾಣು ಅಸ್ತ್ರ ಸಹಿತ ಪಾಕಿಸ್ತಾನ ಯಾವುದೇ ಹಂತಕ್ಕೂ ಹೋಗಲು ಸಿದ್ದ ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಭಾರತ ಸರ್ಕಾರದ ನಿರ್ಧಾರದಿಂದ ವಿಚಲಿತವಾಗಿರುವ ಪಾಕಿಸ್ತಾನವು ವಿಶ್ವದಾದ್ಯಂತ ಕೋಲಾಹಲ ಮೂಡಿಸಲು ಪ್ರಯತ್ನಿಸುತ್ತಿದೆ. ಆದರೆ, ಕಾಶ್ಮೀರ ವಿಚಾರವಾಗಿ ವಿಶ್ವದ ಹಲವು ರಾಷ್ಟ್ರಗಳು ಪಾಕಿಸ್ತಾನಕ್ಕೆ ತಮ್ಮ ಬೆಂಬಲ ನೀಡಿಲ್ಲ. ಇತ್ತೀಚೆಗೆ ವಿಶ್ವಸಂಸ್ಥೆಯಲ್ಲೂ ಪಾಕಿಸ್ತಾನವು ಕಾಶ್ಮೀರದ ವಿಚಾರವಾಗಿ ದೊಡ್ಡ ಹಿನ್ನಡೆ ಅನುಭವಿಸಿತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com