ಹೇಗ್: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರ ದಾಳಿಯ ನಂತರ ಮತ್ತೆ ಭಾರತ ಹಾಗೂ ಪಾಕಿಸ್ತಾನದ ನಡುವೇ ತೀವ್ರ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಸೋಮವಾರ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತೀಯ ರಾಜತಾಂತ್ರಿಕ ಅಧಿಕಾರಿಯೊಬ್ಬರು ತಮ್ಮ ಕೈ ಕುಲುಕುವುದಕ್ಕೆ ಬಂದ ಪಾಕ್ ನ ಹಿರಿಯ ಅಧಿಕಾರಿಯ ಕೈ ಕುಲುಕಿಸದೇ 'ನಮಸ್ತೆ' ಎಂದು ಕೈ ಮುಗಿಯುವ ಮೂಲಕ ತಕ್ಕ ಪಾಠ ಕಲಿಸಿದ್ದಾರೆ.