ಪ್ರಧಾನಿ ನರೇಂದ್ರ ಮೋದಿ ರಾಜಸ್ತಾನದಲ್ಲಿ ರ್ಯಾಲಿಯೊಂದರಲ್ಲಿ ಮಾತನಾಡುತ್ತಿದ್ದಾಗ, ಭಯೋತ್ಪಾದನೆ ವಿರುದ್ಧ ಇಡೀ ವಿಶ್ವದಲ್ಲಿ ಸಹಮತ ವ್ಯಕ್ತವಾಗಿದೆ. ಭಯೋತ್ಪಾದನೆ ನಡೆಸುವವರನ್ನು ಮತ್ತು ಅದಕ್ಕೆ ಕುಮ್ಮಕ್ಕು ನೀಡುವವರನ್ನು ಶಿಕ್ಷಿಸಲು ನಾವು ಮುಂದಡಿ ಇಡುತ್ತಿದ್ದೇವೆ. ಈ ಬಾರಿ ಭಯೋತ್ಪಾದನೆ ವಿರುದ್ಧ ಹೋರಾಡುವ ಸೂಕ್ತ ಸಮಯ ಬಂದಿದೆ. ಭಾರತ ಬದಲಾಗುತ್ತಿದೆ. ಸೈನಿಕರು ಹುತಾತ್ಮರಾದ ನೋವನ್ನು ಮರೆಯಲು ಸಾಧ್ಯವಿಲ್ಲ. ಭಯೋತ್ಪಾದನೆ ವಿರುದ್ಧ ಹೇಗೆ ಹೋರಾಡಬೇಕೆಂದು ಮತ್ತು ಅದನ್ನು ಹೇಗೆ ಮಟ್ಟ ಹಾಕಬೇಕೆಂದು ನಮಗೆ ಗೊತ್ತಿದೆ ಎಂದು ಹೇಳಿದ್ದರು.