ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಕಳೆದ ಫೆಬ್ರವರಿ 14ರಂದು 40ಕ್ಕೂ ಅಧಿಕ ಸಿಆರ್ ಪಿಎಫ್ ಯೋಧರ ಮೇಲೆ ಜೈಶ್ ಎ ಮೊಹಮ್ಮದ್ ಸಂಘಟನೆಯ ಭಯೋತ್ಪಾದಕ ಆತ್ಮಾಹುತಿ ದಾಳಿ ನಡೆಸಿ ಕೊಂದು ಹಾಕಿದ ನಂತರ ಭಾರತ ಇದನ್ನು ತೀವ್ರವಾಗಿ ಖಂಡಿಸಿದ್ದಲ್ಲದೆ ಪಾಕಿಸ್ತಾನಕ್ಕೆ ಹೋಗುತ್ತಿದ್ದ ಕೆಲವು ಸೌಕರ್ಯಗಳನ್ನು ಕೂಡ ನಿಲ್ಲಿಸಿತ್ತು. ಇದೀಗ ಭಾರತ ಮತ್ತು ಪಾಕಿಸ್ತಾನದ ಸ್ಥಿತಿ ಉದ್ವಿಗ್ನವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ಕೃತ್ಯಕ್ಕೆ ಪಾಕ್ ಮೇಲೆ ಖಂಡನೆ ವ್ಯಕ್ತವಾಗಿದೆ.