ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಸೋಮವಾರ ತಮ್ಮನ್ನು ಭೇಟಿ ಮಾಡಿದ್ದ ವೇಳೆ, 'ಜಿ-20 ಶೃಂಗದಲಗ್ಲಿ ಭೇಟಿಯಾದಾಗ ಕಾಶ್ಮೀರ ವಿವಾದ ಇತ್ಯರ್ಥಕ್ಕೆ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ನನಗೆ ಮನವಿ ಮಾಡಿದ್ದರು,' ಎಂದು ಹೇಳಿದ್ದರು. ಈ ಹೇಳಿಕೆಯಿಂದ ಭಾರತ-ಅಮೆರಿಕ ನಡುವಿನ ದ್ವಿಪಕ್ಷೀಯ ಬಾಂಧವ್ಯಕ್ಕೆ ತೊಂದರೆ ಎದುರಾಗಲಿದೆ ಎಂಬ ಸುಳಿವು ಸಿಗುತ್ತಿದ್ದಂತೆ ಎಚ್ಚೆತ್ತ ಅಮೆರಿಕವು ಡ್ಯಾಮೇಜ್ ಕಂಟ್ರೋಲ್ ಪ್ರಯತ್ನ ಆರಂಭಿಸಿದೆ.