ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಮತ್ತು ಸೇನಾ ಮುಖ್ಯಸ್ಥ ಖಮರ್ ಜಾವೇದ್ ಬಜ್ವಾ ಅವರನ್ನು ಭೇಟಿ ಮಾಡಿದ್ದ ಕಾಂಗ್, ಇಸ್ಲಾಮಾಬಾದ್ನಲ್ಲಿ ಶಾಂತಿ ಮತ್ತು ಸುಸ್ಥಿರತೆ ನೆಲಸಲು ಚೀನಾ ನೆರವು ನೀಡುತ್ತದೆ ಎಂದು ಭರವಸೆ ನೀಡಿದ್ದರು. ಹೀಗಾಗಿ ಭಯೋತ್ಪಾದನೆಯನ್ನು ರಕ್ಷಿಸುತ್ತಿದೆ ಎಂದು ಚೀನಾದ ಮೇಲೆ ಆಪಾದನೆ ಮಾಡುವುದು ಬೇಜವಾಬ್ದಾರಿತನದ ಹೇಳಿಕೆಯಾಗಿದೆ. ಆದಾಗ್ಯೂ, ಭಾರತ ಕೆಲವು ತಜ್ಞರು ಚೀನಾದ ಈ ಪ್ರಯತ್ನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಭಯೋತ್ಪಾದನೆಗೆ ಚೀನಾ ತನ್ನ ಬೆಂಬಲವನ್ನು ಮುಂದುವರಿಸಿದೆ ಎಂದು ಆರೋಪಸಿದ್ದಾರೆ. ಅಲ್ಲದೆ, ಭಾರತದ ಸಾಕಷ್ಟು ವಿಶ್ಲೇಷಕರು ಚೀನಾದ ಒನ್ ಬೆಲ್ಟ್ ಒನ್ ರೋಡ್ ಯೋಜನೆ ಭೂ ರಾಜಕೀಯ ಬೆದರಿಕೆ ಎಂದಿದ್ದಾರೆ ಎಂದು ತಿಳಿಸಿದೆ.