ಭಾರತ  ಮೂಲಭೂತ ವಿಷಯಗಳಲ್ಲಿ ಕೆಲಸ ಮಾಡಿದೆ: ಆದರೆ, ಸಮಸ್ಯೆಗಳನ್ನು ಬಗೆಹರಿಸಬೇಕು-ಐಎಂಎಫ್  ಎಂಡಿ

ಭಾರತ ಮೂಲಭೂತ ವಿಷಯಗಳಲ್ಲಿ ಕೆಲಸ ಮಾಡಿದೆ ಆದರೆ, ಧೀರ್ಘಕಾಲಿನ ಆರ್ಥಿಕ ಬೆಳವಣಿಗೆ ಸೇರಿದಂತೆ  ಮತ್ತಿತರ ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಬೇಕಾಗಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದೆ.
ಕ್ರಿಸ್ಟಲಿನಾ ಜಾರ್ಜೀವಾ
ಕ್ರಿಸ್ಟಲಿನಾ ಜಾರ್ಜೀವಾ
Updated on

ವಾಷಿಂಗ್ಟನ್ : ಭಾರತ ಮೂಲಭೂತ ವಿಷಯಗಳಲ್ಲಿ ಕೆಲಸ ಮಾಡಿದೆ ಆದರೆ, ಧೀರ್ಘಕಾಲಿನ ಆರ್ಥಿಕ ಬೆಳವಣಿಗೆ ಸೇರಿದಂತೆ  ಮತ್ತಿತರ ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಬೇಕಾಗಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದೆ.

ಆರ್ಥಿಕತೆಯ ಮೂಲಭೂತ ವಿಷಯಗಳಲ್ಲಿ ಭಾರತ ಕೆಲಸ ಮಾಡಿದೆ. ಆದರೆ, ಹಣಕಾಸು ಕ್ಷೇತ್ರದಲ್ಲಿ ಸಮಸ್ಯೆಗಳಿವೆ ವಿಶೇಷವಾಗಿ  ಬ್ಯಾಂಕೇತರ ಸಂಸ್ಥೆಗಳಲ್ಲಿ ಇದು ಹೆಚ್ಚಾಗಿದೆ. ಬ್ಯಾಂಕುಗಳನ್ನು ಕ್ರೊಢೀಕರಿಸಲು ಈಗ ಕ್ರಮ ಕೈಗೊಳ್ಳಬೇಕಾಗಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ಅವರು ಸಹಾಯ ಮಾಡಬೇಕಾಗಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಮ್ಯಾನೇಜಿಂಗ್ ಡೈರೆಕ್ಟರ್ ಕ್ರಿಸ್ಟಲಿನಾ ಜಾರ್ಜೀವಾ  ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಆರ್ಥಿಕ ಬೆಳವಣಿಗೆ ಧೀರ್ಘಕಾಲೀನ ಕ್ರಮ ಕೈಗೊಳ್ಳಬೇಕಾಗಿದೆ. ಮಾನವ ಬಂಡವಾಳ ಹೂಡಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಮಹಿಳಾ ಕಾರ್ಮಿಕ ಪಡೆಯನ್ನು ಇದರೊಂದಿಗೆ ಮುಂದುವರೆಸಬೇಕಾಗಿದೆ. ಭಾರತದಲ್ಲಿ ಪ್ರತಿಭಾವಂತ ಮಹಿಳೆಯರಿದ್ದಾರೆ ಆದರೆ, ಅವರು ಮನೆಯಲ್ಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕಳೆದ ವರ್ಷ ಸದೃಢ ಆರ್ಥಿಕ ಬೆಳವಣಿಗೆ ಅಂದುಕೊಂಡಿದ್ದ ಭಾರತದ ಆರ್ಥಿಕತೆ  ಈ ಬಾರಿ ಶೇ. 6 ಕ್ಕೆ ಕುಸಿಯುವ ಸಾಧ್ಯತೆ ಇದೆ. ಭಾರತ ರಚನಾತ್ಮಕ ಸುಧಾರಣಾ ಕ್ರಮಗಳಿಗೆ ಆದ್ಯತೆ ನೀಡಬೇಕಾಗಿದೆ. ಇಂತಹ ಸುಧಾರಣಾ ಕ್ರಮಗಳನ್ನು ಮುಂದುವರೆಸಲಿದೆ ಎಂಬ ನಿರೀಕ್ಷೆ ಹೊಂದಿರುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com