8 ಮಿಲಿಯನ್ ಕಾಶ್ಮೀರಿ ಜನರನ್ನು ಬೆದರಿಸಲು  9 ಲಕ್ಷ ಸೈನಿಕರ ನಿಯೋಜನೆ- ಇಮ್ರಾನ್ ಖಾನ್ 

ಸೈನಿಕರನ್ನು ಬಳಸಿಕೊಳ್ಳುವ ಮೂಲಕ ಅಮಾಯಕ ಕಾಶ್ಮೀರಿಗಳನ್ನು ಬೆದರಿಸಿ ತನ್ನ ಭೂ ಸ್ವಾಧೀನ ಕಾರ್ಯಸೂಚಿಯನ್ನು ಸಾಧಿಸಿಲು ಪ್ರಧಾನಿ ನರೇಂದ್ರ ಮೋದಿ ಚಿಂತಿಸಿದ್ದಾರೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಶುಕ್ರವಾರ ಟೀಕಿಸಿದ್ದಾರೆ.
ಇಮ್ರಾನ್ ಖಾನ್
ಇಮ್ರಾನ್ ಖಾನ್
Updated on

ಇಸ್ಲಾಮಾಬಾದ್ : ಸೈನಿಕರನ್ನು ಬಳಸಿಕೊಳ್ಳುವ ಮೂಲಕ ಅಮಾಯಕ ಕಾಶ್ಮೀರಿಗಳನ್ನು ಬೆದರಿಸಿ ತನ್ನ ಭೂ ಸ್ವಾಧೀನ ಕಾರ್ಯಸೂಚಿಯನ್ನು ಸಾಧಿಸಿಲು ಪ್ರಧಾನಿ ನರೇಂದ್ರ ಮೋದಿ ಚಿಂತಿಸಿದ್ದಾರೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಶುಕ್ರವಾರ ಟೀಕಿಸಿದ್ದಾರೆ.

ಜಮ್ಮು- ಕಾಶ್ಮೀರದಲ್ಲಿ 75 ದಿನಗಳಾದರೂ ನಿರ್ಬಂಧ ಮುಂದುವರೆಸಿರುವ ಮೋದಿ ಆಕ್ರಮಿತ ಸರ್ಕಾರ, ಅಮಾಯಕ ಕಾಶ್ಮೀರಿ ಜನರನ್ನು ಬೆದರಿಸಲು 9 ಲಕ್ಷ ಸೈನಿಕರನ್ನು  ನಿಯೋಜಿಸುವ ಮೂಲಕ ಸ್ವಾಧೀನ ಕಾರ್ಯವನ್ನು ಸಾಧಿಸಲು ಮೋದಿ ತಂತ್ರ ರೂಪಿಸಿದ್ದಾರೆ. ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ 9 ಲಕ್ಷ ಸೈನಿಕರ ಅಗತ್ಯವಿಲ್ಲ. 8 ಮಿಲಿಯನ್ ಕಾಶ್ಮೀರಿ ಜನರಲ್ಲಿ ಭಯ ಭೀತಿ ಮೂಡಿಸಲಾಗುತ್ತಿದೆ ಎಂದು ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಯಭೀತರಾಗಿದ್ದಾರೆ ಎಂದಿದ್ದಾರೆ. ಜಮ್ಮು- ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಇಡೀ ವಿಶ್ವ ಗಮನಿಸುತ್ತಿದೆ. ನಿರ್ಬಂಧವನ್ನು ತೆಗೆದರೆ ರಕ್ತದೋಕುಳಿ ನಡೆಯಲಿದೆ ಎಂಬ ಭಯ ಮೋದಿಗೆ ಇದೆ. 
ಇದು ಕಾಶ್ಮೀರಿ ಜನರನ್ನು ನಿಗ್ರಹಿಸುವ ಏಕೈಕ ಮಾರ್ಗವಾಗಿದೆ ಎಂದು ಇಮ್ರಾನ್ ಖಾನ್ ಬರೆದುಕೊಂಡಿದ್ದಾರೆ.

ಭಾರತ ಸರ್ಕಾರ ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಪಡಿಸಿ ನಿರ್ಬಂಧ ಹೇರಿ ಸಂವಹನವನ್ನು ಸ್ಥಗಿತಗೊಳಿಸಿದ ನಂತರ ಆಗಸ್ಟ್ 5 ರಿಂದಲೂ ಆಕ್ರಮಿತ ಕಾಶ್ನೀರದಲ್ಲಿ ಭಯ, ಹತಾಶೆ ಹೆಚ್ಚಾಗಿದೆ. ಮೊಬೈಲ್ ಪೋನ್ ಗಳ ಕರೆ ಹಾಗೂ  ಪಠ್ಯ ಸೇವೆಗಳನ್ನು ಆರಂಭಗೊಂಡಿತಾದರೂ, ಮಂಗಳವಾರದಿಂದ ಪಠ್ಯ ಸೇವೆಗಳನ್ನು ಮತ್ತೆ ನಿರ್ಬಂಧಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com