ಉಗ್ರರ ನೆಲೆ ಧ್ವಂಸಗೊಳಿಸಿದ ಭಾರತೀಯ ಸೇನೆ: ದಾಳಿ ಸ್ಥಳಕ್ಕೆ ವಿದೇಶಿ ನಿಯೋಗ ಕರೆದೊಯ್ದ ಪಾಕ್ ಸೇನೆ!
ಉಗ್ರರ ನೆಲೆ ಧ್ವಂಸಗೊಳಿಸಿದ ಭಾರತೀಯ ಸೇನೆ: ದಾಳಿ ಸ್ಥಳಕ್ಕೆ ವಿದೇಶಿ ನಿಯೋಗ ಕರೆದೊಯ್ದ ಪಾಕ್ ಸೇನೆ!

ಉಗ್ರರ ನೆಲೆ ಧ್ವಂಸಗೊಳಿಸಿದ ಭಾರತೀಯ ಸೇನೆ: ದಾಳಿ ಸ್ಥಳಕ್ಕೆ ವಿದೇಶಿ ನಿಯೋಗ ಕರೆದೊಯ್ದ ಪಾಕ್ ಸೇನೆ!

ಗಡಿ ನಿಯಂತ್ರಣ ರೇಖೆ ಬಳಿ ಇರುವ ಉಗ್ರರ ನೆಲೆಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದ ಬೆನ್ನಲ್ಲೇ, ಅದನ್ನು ಸುಳ್ಳು ಎಂದು ಸಾಬೀತುಪಡಿಸಲು ಪಾಕಿಸ್ತಾನ ವಿವಿಧ ನಾಟಕಗಳನ್ನು ಆಡಲು ಶುರು ಮಾಡಿದೆ. 
Published on

ಇಸ್ಲಾಮಾಬಾದ್: ಗಡಿ ನಿಯಂತ್ರಣ ರೇಖೆ ಬಳಿ ಇರುವ ಉಗ್ರರ ನೆಲೆಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದ ಬೆನ್ನಲ್ಲೇ, ಅದನ್ನು ಸುಳ್ಳು ಎಂದು ಸಾಬೀತುಪಡಿಸಲು ಪಾಕಿಸ್ತಾನ ವಿವಿಧ ನಾಟಕಗಳನ್ನು ಆಡಲು ಶುರು ಮಾಡಿದೆ. 

ದಾಳಿಯಾದ ಸ್ಥಳಗಳಿಗೆ ವಿದೇಶಿ ಪ್ರತಿನಿಧಿಗಳನ್ನು ಕರೆದುಕೊಂಡು ಬನ್ನಿ ಎಂದು ಸವಾಲು ಹಾಕಿದ್ದ ಪಾಕಿಸ್ತಾನ, ಇದೀಗ ಸ್ವತಃ ತಾನೇ ವಿದೇಶಿ ಪ್ರತಿನಿಧಿಗಳನ್ನು ಕರೆದುಕೊಂಡು ಹೋಗಿ ದಾಳಿಯೇ ನಡೆದಿಲ್ಲ ಎಂದು ಬಿಂಬಿಸಲು ಹೊರಟಿದೆ. 

ತಾನು ಆಕ್ರಮಿಸಿಕೊಂಡಿರುವ ಜಮ್ಮು ಮತ್ತು ಕಾಶ್ಮೀರದ ನೀಲಂ ಕಣಿವೆಯ ನೌಶೇರಿ, ಸಹಾಕೋರ್ಟ ಮತ್ತು ಜೂರಾ ವಲಯಕ್ಕೆ ನಿನ್ನೆ ವಿದೇಶಿ ಪ್ರತಿನಿಧಿಗಳನ್ನು ಕರೆದುಕೊಂಡು ಹೋಗಲಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಇಲಾಖೆಯ ವಕ್ತಾರ ಮೊಹಮ್ಮದ್ ಫೈಸರ್ ಟ್ವೀಟ್ ಮಾಡಿದ್ದಾರೆ. ಅಲ್ಲದೇ, ಭಾರತೀಯ ಯೋಧರ ದಾಳಿಯಿಂದ ಭಾರೀ ಹಾನಿಗೀಡಾದ ನೌಸದಾ ಗ್ರಾಮಕ್ಕೂ ವಿದೇಶಿ ಪ್ರತಿನಿಧಿಗಳು ಭೇಟಿ ನೀಡಿದ್ದಾರೆ.

ಭಾರತೀಯ ಸೇನೆ ಉಗ್ರ ನೆಲೆಗಳು ಎಂದು ಆರೋಪಿಸಿದ ಸ್ಥಳೀಯರ ಮನೆಗಳಿಗೆ ಭೇಟಿ ನೀಡಿದ್ದಾರೆ. ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿಕೆಯ ಬಗ್ಗೆ ಪರಿಶೀಲನೆ ನಡೆಸಲು ಭೇಟಿ ನೀಡಲಾಗಿದೆ. ಭೇಟಿಯಲ್ಲಿ ಭಾರತೀಯ ರಾಯಭಾರಿ ಅಧಿಕಾರಿಗಳು ಭಾಗಿಯಾಗಿಲ್ಲ. ಭಾರತ ಸೇನೆಯ ಹೇಳಿಕೆಯಾಗಿಯೇ ಉಳಿದಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com