ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿವಾದ ಪ್ರಸ್ತಾಪಿಸಿದರೆ ಪಾಕಿಸ್ತಾನದ ಘನತೆಗೆ ಧಕ್ಕೆ, ಭಾರತಕ್ಕಲ್ಲ: ಸೈಯದ್ ಅಕ್ಬರುದ್ದೀನ್ 

ಮುಂದಿನ ವಾರ ವಿಶ್ವಸಂಸ್ಥೆಯ ಉನ್ನತ ಮಟ್ಟದ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸಿದರೆ ಪಾಕಿಸ್ತಾನದ ಮಾನ ಹರಾಜಾಗುತ್ತದೆ. ಭಯೋತ್ಪಾದನೆಗೆ ಪ್ರೋತ್ಸಾಹ ನೀಡಿದ ಪಾಕಿಸ್ತಾನಕ್ಕೆ ದ್ವೇಷದ ಮಾತುಗಳನ್ನಾಡುವುದೇ ಮುಖ್ಯವಾಗಿಬಿಟ್ಟಿದೆ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಸೈಯದ್ ಅಕ್ಬರುದ್ದೀನ್ ಹೇಳಿದ್ದಾರೆ. 
ಸೈಯದ್ ಅಕ್ಬರುದ್ದೀನ್
ಸೈಯದ್ ಅಕ್ಬರುದ್ದೀನ್
Updated on

ಭಾರತದ ಗೌರವ, ಘನತೆ ಮತ್ತಷ್ಟು ಹೆಚ್ಚಾಗುತ್ತದೆ ಎಂದ ಸೈಯದ್ ಅಕ್ಬರುದ್ದೀನ್ 

ಯುನೈಟೆಡ್ ನೇಷನ್ಸ್: ಮುಂದಿನ ವಾರ ವಿಶ್ವಸಂಸ್ಥೆಯ ಉನ್ನತ ಮಟ್ಟದ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸಿದರೆ ಪಾಕಿಸ್ತಾನದ ಮಾನ ಹರಾಜಾಗುತ್ತದೆ. ಭಯೋತ್ಪಾದನೆಗೆ ಪ್ರೋತ್ಸಾಹ ನೀಡಿದ ಪಾಕಿಸ್ತಾನಕ್ಕೆ ದ್ವೇಷದ ಮಾತುಗಳನ್ನಾಡುವುದೇ ಮುಖ್ಯವಾಗಿಬಿಟ್ಟಿದೆ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಸೈಯದ್ ಅಕ್ಬರುದ್ದೀನ್ ಹೇಳಿದ್ದಾರೆ.


ಮುಂದಿನ ವಾರ ಸೆಪ್ಟೆಂಬರ್ 27ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆ ನಡೆಯಲಿದ್ದು ಅದರಲ್ಲಿ ಕಾಶ್ಮೀರ ವಿಚಾರವನ್ನು ಪ್ರಸ್ತಾಪಿಸುವುದಾಗಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದರು. ಅಂದೇ ಭಾರತದ ಪ್ರಧಾನಿ ನರೇಂದ್ರ ಮೋದಿ ಕೂಡ ವಿಶ್ವಸಂಸ್ಥೆಯಲ್ಲಿ ಮಾತನಾಡುವ ಸಾಧ್ಯತೆಯಿದೆ.


ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೈಯದ್ ಅಕ್ಬರುದ್ದೀನ್ ಅವರಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿವಾದ ವಿಷಯ ಚರ್ಚೆಗೆ ಬರಬೇಕೆಂದು ನೀವು ಬಯಸುತ್ತೀರಾ ಮತ್ತು ಅದು ಪ್ರಸ್ತಾಪವಾದರೆ ಭಾರತ ಹೇಗೆ ಅದನ್ನು ನಿಭಾಯಿಸುತ್ತದೆ ಎಂದು ಪತ್ರಕರ್ತರು ಕೇಳಿದರು. 


ಅದಕ್ಕೆ ಸೈಯದ್ ಅಕ್ಬರುದ್ದೀನ್, ದೇಶದ ವಿಚಾರದಲ್ಲಿ ಜಾಗತಿಕ ವೇದಿಕೆಗಳನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದನ್ನು ದೇಶಗಳು ಅರ್ಥ ಮಾಡಿಕೊಳ್ಳಬೇಕು, ಪಾಕಿಸ್ತಾನ ಮುಂದಿನ ವಾರ ಕಾಶ್ಮೀರ ವಿವಾದ ಪ್ರಸ್ತಾಪಿಸಿದರೆ ಅದರ ಮಟ್ಟ ಕೆಳಗಿಳಿಯುತ್ತದೆ, ಭಾರತ ಇನ್ನಷ್ಟು ಎತ್ತರಕ್ಕೆ ಬೆಳೆಯುತ್ತದೆ. ಪ್ರಧಾನ ಮಂತ್ರಿಗಳು ನಡೆಸುವ ಸಭೆಗಳು, ಬಹುಪಕ್ಷೀಯ ಮತ್ತು ದ್ವಿಪಕ್ಷೀಯ ಮಾತುಕತೆಗಳ ಮೂಲಕ ಭಾರತದ ಸ್ಥಾನ ವಿಶ್ವಸಂಸ್ಥೆಯಲ್ಲಿ ಹೆಚ್ಚಾಗುತ್ತದೆ ಎಂದರು.


ಪಾಕಿಸ್ತಾನ ಏನು ಮಾಡುತ್ತದೆ ಎಂಬುದು ಅದಕ್ಕೆ ಬಿಟ್ಟದ್ದು. ಪಾಕಿಸ್ತಾನ ಹೇಗೆ ಭಯೋತ್ಪಾದನೆಯ ತಾಣವಾಗಿದೆ ಎಂದು  ಎಲ್ಲರಿಗೂ ಗೊತ್ತಿದೆ. ಈಗ ದ್ವೇಷದ ಮಾತುಗಳ ಮೂಲಕ ತಮ್ಮ ಸ್ಥಾನಮಾನವನ್ನು ಕೆಳಹಂತಕ್ಕೆ ತರಬೇಕೆಂದರೆ ತಂದುಕೊಳ್ಳಲಿ ಅದು ಅವರ ಇಷ್ಟ, ದ್ವೇಷ, ವಿಷಯ ಮಾತುಗಳು, ಬರಹಗಳು ಹೆಚ್ಚು ಸಮಯ ಬಾಳುವುದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com