ನನ್ನ ದೇಶಕ್ಕಿಂತ ಹೆಚ್ಚು ಭಾರತದ ಬಗ್ಗೆ ಆತಂಕಕ್ಕೊಳಗಾಗಿದ್ದೇನೆ: ಇಮ್ರಾನ್ ಖಾನ್ 

ಅಮೆರಿಕ ಪ್ರವಾಸದಲ್ಲಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ವಿಶ್ವಸಂಸ್ಥೆ ಸಾಮಾನ್ಯ ಸಭೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಪಾಕಿಸ್ತಾನಕ್ಕಿಂತ ಹೆಚ್ಚು ಭಾರತದ ಬಗ್ಗೆ ಆತಂಕಕ್ಕೊಳಗಾಗಿದ್ದೇನೆ ಎಂದು ಹೇಳಿದ್ದಾರೆ. 
ನನ್ನ ದೇಶಕ್ಕಿಂತ ಹೆಚ್ಚು ಭಾರತದ ಬಗ್ಗೆ ಆತಂಕಕ್ಕೊಳಗಾಗಿದ್ದೇನೆ: ಇಮ್ರಾನ್ ಖಾನ್
ನನ್ನ ದೇಶಕ್ಕಿಂತ ಹೆಚ್ಚು ಭಾರತದ ಬಗ್ಗೆ ಆತಂಕಕ್ಕೊಳಗಾಗಿದ್ದೇನೆ: ಇಮ್ರಾನ್ ಖಾನ್
Updated on

ನ್ಯೂಯಾರ್ಕ್: ಅಮೆರಿಕ ಪ್ರವಾಸದಲ್ಲಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ವಿಶ್ವಸಂಸ್ಥೆ ಸಾಮಾನ್ಯ ಸಭೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಪಾಕಿಸ್ತಾನಕ್ಕಿಂತ ಹೆಚ್ಚು ಭಾರತದ ಬಗ್ಗೆ ಆತಂಕಕ್ಕೊಳಗಾಗಿದ್ದೇನೆ ಎಂದು ಹೇಳಿದ್ದಾರೆ. 

ಪಾಕಿಸ್ತಾನಕ್ಕಿಂತ ಹೆಚ್ಚು ಭಾರತದಲ್ಲಿರುವ ಈಗಿನ ಪರಿಸ್ಥಿತಿಯ ಬಗ್ಗೆ ಆತಂಕಗೊಂಡಿದ್ದೇನೆ,  ಭಾರತ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ, ಪರಿಸ್ಥಿತಿ ಕೈಮೀರುವುದಕ್ಕೂ ಮುನ್ನ ವಿಶ್ವಸಮುದಾಯ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕೆಂದು ಇಮ್ರಾನ್ ಖಾನ್ ಹೇಳಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಪ್ರಸ್ತಾಪಿಸದೇ ಎನ್ ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಪಾಕ್ ಪ್ರಧಾನಿ,  ಕಳೆದ 6 ವರ್ಷಗಳಿಂದ ಭಾರತದಲ್ಲಿನ ಬೆಳವಣಿಗೆಗಳು ಭಯಾನಕವಾಗಿದೆ. ಇದು ನನಗೆ ತಿಳಿದಿರುವ ಮಹಾತ್ಮಾ ಗಾಂಧಿ ಹಾಗೂ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಭಾರತವಲ್ಲ ಎಂದು ಹೇಳಿದ್ದಾರೆ. 

ಭಾರತವನ್ನು ಹಿಂದು ಸರ್ವೋಚ್ಛ ಸಿದ್ಧಾಂತ ಆಕ್ರಮಿಸಿಕೊಂಡಿದೆ. ಸರ್ವೋಚ್ಛವಾಗಿರುವುದಕ್ಕೆ ಮತ್ತೊಬ್ಬರನ್ನು ದ್ವೇಷಿಸಬೇಕಾಗುತ್ತದೆ. ಇದೇ ಸಿದ್ಧಾಂತವೇ ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ್ದು ಎಂದು ಇಮ್ರಾನ್ ಖಾನ್ ಹೇಳಿದ್ದಾರೆ. 

ಈ ಹಿಂದೆ ಚರಿತ್ರೆಯಲ್ಲಿ ಮೂರು ಬಾರಿ ಯಾವ ಸಿದ್ಧಾಂತವನ್ನು ನಿಷೇಧಿಸಲಾಗಿತ್ತೋ ಅದೇ ಸಿದ್ಧಾಂತವೇ ಈಗ ಭಾರತ ದೇಶವನ್ನು ಆಳುತ್ತಿದೆ ಎಂದು ಇಮ್ರಾನ್ ಖಾನ್ ಭಾರತದ ಆಂತರಿಕ ವಿಷಯದ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com