ಈಸ್ಟರ್ ಭಾನುವಾರದ ದಿನ ಚರ್ಚ್ ಹಾಗೂ ಇನ್ನಿತರ ಪ್ರದೇಶಗಳ ಮೇಲೆ ಬಾಂಬ್ ದಾಳಿ ನಡೆಸಿ ಸುಮಾರು 300 ಜನರನ್ನು ಹತ್ಯೆ ಮಾಡಿದ್ದು ಲಂಕಾದ ನ್ಯಾಷನಲ್ ಥೌಹೀದ್ ಜಮಾತ್ ಉಗ್ರ ಸಂಘಟನೆ. ಈ ಜಿಹಾದಿ ಉಗ್ರ ಸಂಘಟನೆ ಹಾಗೂ ಅದರ ಮುಖ್ಯಸ್ಥರ ಬಗ್ಗೆ ಶ್ರೀಲಂಕಾದ ಮುಸ್ಲಿಂ ಕೌನ್ಸಿಲ್ ನ ಉಪಾಧ್ಯಕ್ಷ ಹಿಲ್ಮಿ ಅಹ್ಮದ್ ಸೇನಾ ಗುಪ್ತಚರ ಇಲಾಖೆ ಅಧಿಕಾರಿಗಳಿಗೆ 3 ವರ್ಷಗಳ ಹಿಂದೆಯೇ ಮಾಹಿತಿ ನೀಡಿ ಎಚ್ಚರಿಸಿದ್ದರು.