ರಾವಲ್ಪಿಂಡಿಯಲ್ಲಿರುವ ಪಾಕ್ ಸೇನೆ ಹೆಡ್ ಕ್ವಾರ್ಟರ್ಸ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾಕ್ ಸೇನಾ ವಕ್ತಾರ ಮೇಜರ್ ಜನರಲ್ ಆಸಿಫ್ ಗಫೂರ್, ಭಾರತ ಸರ್ಕಾರ ತಾನು ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ಕ್ಯಾಂಪ್ ಗಳನ್ನು ಧ್ವಂಸ ಮಾಡಿರುವುದಾಗಿ ಹೇಳಿದೆ. ತನ್ನ ವಾಯುದಾಳಿಯಲ್ಲಿ ಜೈಶ್ ಉಗ್ರ ಸಂಘಟನೆಯ ಕ್ಯಾಂಪ್ ಗಳು ಧ್ವಂಸವಾಗಿದ್ದವು ಎಂದು ಭಾರತ ಸರ್ಕಾರ ಹೇಳಿದೆ. ಆದರೆ ಅಂದು ಅಂತಹ ಯಾವುದೇ ರೀತಿಯ ನಷ್ಟ ಸಂಭವಿಸಿಲ್ಲ. ಭಾರತ ಸರ್ಕಾರ ಸುಳ್ಳು ಹೇಳಿದೆ. ಈ ಕುರಿತ ಸತ್ಯ ದರ್ಶನಕ್ಕಾಗಿ ಭಾರತೀಯ ಪತ್ರಕರ್ತರನ್ನು ಬಾಲಾಕೋಟ್ ಗೆ ಕರೆದುಕೊಂಡು ಹೋಗಲು ತಾನು ಸಿದ್ಧ ಎಂದು ಗಫೂರ್ ಹೇಳಿದ್ದಾರೆ.