ಇಸ್ಲಾಮಾಬಾದ್ ನಲ್ಲಿ ನಡೆದ ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಮಿತಿ ಸಭೆಯಲ್ಲಿ ಸೇನಾಧಿಕಾರಿಗಳ ಜೊತೆಗಿನ ಭೇಟಿ ಬಳಿಕ ಮಾತನಾಡಿದ ಇಮ್ರಾನ್ ಖಾನ್ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿನ ಪರಿಸ್ಥಿತಿ ಕುರಿತು ತಾವು ಅವಲೋಕಿಸುತ್ತಿದ್ದು, ಭದ್ರತಾ ಅಧಿಕಾರಿಗಳು ಕೂಡ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಭಾರತ ಯಾವುದೇ ರೀತಿಯ ದುಸ್ಸಾಹಸಕ್ಕೆ ಕೈ ಹಾಕಿದರೆ ಅಥವಾ ಆಕ್ರಮಣಕಾರಿ ಮನೋಭಾವ ತೋರಿದರೆ ತಕ್ಕ ಶಾಸ್ತಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.