ಸಭೆಯ ನಂತರ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಳ್ಳಲು, ಭಾರತದೊಂದಿಗೆ ದ್ವಿಪಕ್ಷೀಯ ವ್ಯಾಪಾರವನ್ನು ಸ್ಥಗಿತಗೊಳಿಸಲು, ನಿರ್ಧರಿಸುವುದರೊಡನೆ ಕಾಶ್ಮೀರ ವಿಚಾರದಲ್ಲಿನ ಭಾರತದ ನಿರ್ಧಾರವನ್ನು ವಿಶ್ವಸಂಸ್ಥೆಯಲ್ಲಿ ಪ್ರಶ್ನಿಸಲು ತೀರ್ಮಾನಿಸಿದೆ. ಮಾತ್ರವಲ್ಲ ಆಗಸ್ಟ್ 14 ರಂದು ಕಾಶ್ಮೀರಿಗಳು ಒಗ್ಗಟ್ಟಾಗಿ ಕಾಶ್ಮೀರದಲ್ಲಿ ಪಾಕ್ ಸ್ವಾತಂತ್ರ ದಿನಾಚರಣೆ ಮಾಡುವುದಕ್ಕೆ ಎನ್ಎಸ್ಸಿ ಸೂಚಿಸಿದೆ.