ದಕ್ಷಿಣ ಕೊರಿಯಾ ಸರ್ಕಾರದಿಂದ ಸಿಯೊಲ್ ಶಾಂತಿ ಪುರಸ್ಕಾರ ಪಡೆದಿರುವ ಪ್ರಧಾನಿ ನರೇಂದ್ರ ಮೋದಿ ಸಮಾರಂಭದಲ್ಲಿ ಮಾತನಾಡಿ, ಈ ಪುರಸ್ಕಾರ ನನಗೆ ವೈಯಕ್ತಿಕವಾಗಿ ಸೇರಿದ್ದಲ್ಲ, ಎಲ್ಲಾ ಭಾರತೀಯರಿಗೆ ಸೇರಬೇಕಾದ್ದು. ಕಳೆದ 5 ವರ್ಷಗಳಲ್ಲಿ ಭಾರತ ಮಾಡಿರುವ ಸಾಧನೆಗೆ ದೇಶದ 1.3 ಶತಕೋಟಿ ಜನರ ಕೌಶಲ್ಯವೇ ಕಾರಣವಾಗಿದೆ ಎಂದು ಸ್ಮರಿಸಿಕೊಂಡರು.