ಬ್ರಿಟನ್ ಸರ್ಕಾರವನ್ನು ಬೆಚ್ಚಿಬೀಳಿಸಿದ ಕೇರಳ ಕಿಚ್ಚು: ಜಾಗರೂಕರಾಗಿರುವಂತೆ ತನ್ನ ಪ್ರಜೆಗಳಿಗೆ ಎಚ್ಚರಿಕೆ

ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಖಂಡಿಸಿ, ಕೇರಳ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮತ್ತು ಹಿಂಸಾಚಾರದ ಕಿಚ್ಚು ಬ್ರಿಟನ್ ಸರ್ಕಾರವನ್ನು ಬೆಚ್ಚಿಬೀಳಿಸಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಲಂಡನ್: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಖಂಡಿಸಿ, ಕೇರಳ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮತ್ತು ಹಿಂಸಾಚಾರದ ಕಿಚ್ಚು ಬ್ರಿಟನ್ ಸರ್ಕಾರವನ್ನು ಬೆಚ್ಚಿಬೀಳಿಸಿದೆ. 
ಕೇರಳದಲ್ಲಿ ಹಿಂಸಾಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹೆಚ್ಚು ಜನರು ಸೇರುವ ಸಾರ್ವಜನಿಕ ಪ್ರದೇಶಗಳಲ್ಲಿ ಗಲಭೆ ಹಾಗೂ ಹಿಂಸಾಚಾರವಾಗುವ ಸಾಧ್ಯತೆಗಳಿದ್ದು, ಭಾರತಕ್ಕೆ ಭೇಟಿ ನೀಡುವ ತನ್ನ ಪ್ರಜೆಗಳಿಗೆ ಜಾಗರೂಕರಾಗಿರುವಂತೆ ಎಚ್ಚರಿಕೆ ನೀಡಿದೆ. 
ಜನನಿಬಿಡ ಪ್ರದೇಶಗಳಲ್ಲಿ ಹೆಚ್ಚು ಹಿಂಸಾಚಾರ ಸೃಷ್ಟಿಯಾಗುವ ಸಾಧ್ಯತೆಗಳಿದ್ದು. ಇಂತಹ ಪ್ರದೇಶಗಳಿಂದ ಅಂತರ ಕಾಯ್ದುಕೊಳ್ಳುವಂತೆ ಮತ್ತು ಹೆಚ್ಚು ಜಾಗರೂಕರಾಗಿರುವಂತೆ ಸಲಹೆ ರೂಪದಲ್ಲಿ ತನ್ನ ಪ್ರಜೆಗಳಿಗೆ ಬ್ರಿಟನ್ ಸರ್ಕಾರ ಎಚ್ಚರಿಕೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com