ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ತಮ್ಮ ಕಲ್ಪನೆಯ ಭಾರತದ ಕುರಿತು ಮಾತನಾಡಿದ್ದರು. ಜಾತಿ ನಿರ್ಮೂಲನೆ, ಜಾತ್ಯಾತೀತತೆ ಬಗ್ಗೆ ಮಾತನಾಡುವ ವೇಳೆ ಬಾಲಕಿಯೊರ್ವಳು ರಾಹುಲ್ ಗಾಂಧಿಗೆ ಗುಜರಾತ್ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ದೇವಸ್ಥಾನ ಸುತ್ತಿದ್ದು ಮತ್ತು ಕಾಶ್ಮೀರ ಭೇಟಿ ವೇಳೆ ಮುಸ್ಲಿಂ ಟೋಪಿ ಧರಿಸಿದ್ದು ಸರಿಯೇ ಎಂದು ಪ್ರಶ್ನಿಸಿದ್ದಳು.