2017ರಲ್ಲಿ ಜಾಧವ್ ಅವರನ್ನು ಪಾಕಿಸ್ತಾನ ಬಂಧಿಸಿತ್ತು. ಇವರ ವಿಚಾರಣೆ ನಡೆಸಿದ್ದ ಪಾಕಿಸ್ತಾನದ ಸೇನಾ ನ್ಯಾಯಾಲಯವು, ‘ಜಾಧವ್ ಬಲೂಚಿಸ್ತಾನವನ್ನು ಅಸ್ಥಿರಗೊಳಿಸಲು ದೇಶದೊಳಗೆ ನುಸುಳಿ ಬಂದಿರುವ ಭಾರತೀಯ ಗೂಢಚಾರ’ ಎಂದು ಆರೋಪಿಸಿ, ಅವರಿಗೆ ಮರಣದಂಡನೆ ವಿಧಿಸಿತ್ತು. ಈ ತೀರ್ಪಿನ ವಿರುದ್ಧ ಅಂತರರಾಷ್ಟ್ರೀಯ ನ್ಯಾಯಾಲಯದ ಮೊರೆಹೋಗಿದ್ದ ಭಾರತವು, ‘ಜಾಧವ್ ಅವರ ವಿಚಾರಣೆಯನ್ನು ನ್ಯಾಯಬದ್ಧವಾಗಿ ನಡೆಸಿಲ್ಲ. ಪಾಕಿಸ್ತಾನವು ಅವರಿಗೆ ರಾಜತಾಂತ್ರಿಕ ನೆರವನ್ನು ನಿರಾಕರಿಸಿತ್ತು. ಅದು ವಿಯೆನ್ನಾ ಒಪ್ಪಂದದ ಉಲ್ಲಂಘನೆಯಾಗುತ್ತದೆ’ ಎಂದು ವಾದಿಸಿತ್ತು.