ಪಾಕಿಸ್ತಾನದ ವಾಯುಯಾನ ಸಚಿವ ಗುಲಾಮ್ ಸರ್ವರ್ ಖಾನ್, ಸಿಎಸ್ಎಸ್ ಪ್ರಧಾನ ಕಚೇರಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ''ವಾಯುಯಾನ ಮುಚ್ಚಿದ್ದರಿಂದ ನಮ್ಮ ಉದ್ಯಮಕ್ಕೆ ದೊಡ್ಡ ನಷ್ಟವಾಗಿದೆ. ಆದರೆ, ನಿರ್ಬಂಧದಿಂದಾಗಿ ಪಾಕಿಸ್ತಾನಕ್ಕಿಂತ ಭಾರತವು ಹೆಚ್ಚು ತೊಂದರೆ ಎದುರಿಸಬೇಕಾಯಿತು. ಪಾಕ್ ಗಿಂತ ಭಾರತ ಎರಡು ಪಟ್ಟು ಹೆಚ್ಚು ನಷ್ಟ ಅನುಭವಿಸಿದೆ. ಆದರೆ, ಇಂತಹ ಪರಿಸ್ಥಿತಿಯಲ್ಲಿ ಎರಡು ದೇಶಗಳಿಗೆ ಸೌಹಾರ್ದತೆಯ ಅಗತ್ಯವಿದೆ'' ಎಂದರು.