ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಅಜಯ್ ಬಿಸಾರಿಯಾ ಅವರು, ಪಾಕ್ ಸೇನಾಧಿಕಾರಿಗಳು ಕೇವಲ ಮೂಲ ರಾಜತಾಂತ್ರಿಕ ನೀತಿ-ನಿಯಮಗಳನ್ನು ಮಾತ್ರ ಉಲ್ಲಂಘನೆ ಮಾಡಿಲ್ಲ. ಬದಲಿಗೆ ಮಾನವೀಯತೆ ಮತ್ತು ನಾಗರೀಕತೆಯನ್ನೇ ಮರೆತಂತೆ ವರ್ತಿಸಿದ್ದಾರೆ. ಅವರ ಇಂತಹ ವರ್ತನೆ ಉಭಯ ದೇಶಗಳ ನಡುವಿನ ಸಂಬಂಧದ ಮೇಲೆ ಗಂಭೀರ ಪರಿಣಾಮ ಬೀರುವಂತೆ ಮಾಡಿದೆ ಎಂದು ಹೇಳಿದ್ದಾರೆ.