ಕೂಟದಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನದ ನೂರಾರು ಗಣ್ಯರು ಕೂಡ ಆಗಮಿಸಿದ್ದರು. ಇದೇ ಸಂದರ್ಭದಲ್ಲಿ ಭದ್ರತೆಗೆ ಆಗಮಿಸಿದ್ದ ಪಾಕ್ ಸೇನಾ ಸಿಬ್ಬಂದಿ ಗಣ್ಯರಿಗೆ ಪ್ರಾಣ ಭೀತಿ ಒಡ್ಡಿದ್ದಲ್ಲದೆ, ನಾನಾ ಬಗೆಯ ಕಿರುಕುಳ ಕೊಟ್ಟು, ಅವಮಾನ ಮಾಡಿ ವಾಪಸು ಕಳುಹಿಸಿದ್ದಾರೆ ಎನ್ನಲಾಗಿದೆ. ಯೋಧರು ಅಕ್ಷರಶಃ ಹೋಟೆಲ್ ಅನ್ನು ಸುತ್ತುವರಿದ್ದಿದ್ದರು. ನಂಬರ್ ಮರೆಮಾಚಿದ ಮೊಬೈಲ್ಫೋನ್ನಿಂದ ಕರೆ ಮಾಡಿ, ಅತಿಥಿಗಳನ್ನು ಹೊರಕರೆದು ಅವಮಾನಿಸಿದ್ದಾಗಿ ಭಾರತದ ರಾಯಭಾರ ಕಚೇರಿ ಅಧಿಕಾರಿಗಳು ಆರೋಪಿಸಿದ್ದಾರೆ.