ರಾಣಾ ಪಾಕ್ನ ಮಾಜಿ ಯೋಧ ಹಾಗೂ ಜೈಷ್ ಇ ಮೊಹಮ್ಮದ್ ಸಂಘಟನೆಯ ಮಾಜಿ ಉಗ್ರ. ತಾನು ಅಪ್ಲೋಡ್ ಮಾಡಿರುವ 42 ಸೆಂಕೆಡಿನ ವಿಡಿಯೋ ಸಂದೇಶದಲ್ಲಿ ಪಾಕಿಸ್ತಾನಿ ಸೇನೆ ಯುವಕರನ್ನು ಜಿಹಾದ್ ಕಡೆ ಪ್ರಚೋದಿಸುತ್ತದೆ ಎಂಬ ಕರಾಳತೆಯನ್ನು ಬಿಚ್ಚಿಟ್ಟಿದ್ದಾನೆ. ವಿಡಿಯೋದಲ್ಲಿ ಪಾಕಿಸ್ತಾನದ ಬಾಲಾಕೋಟ್ ನಲ್ಲಿನ ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ ವಿರುದ್ಧ ಭಾರತ ನಡೆಸಿದ ವೈಮಾನಿಕ ದಾಳಿಯ ಕುರಿತು ಮಾತನಾಡಿರುವ ರಾಣಾ, ಬಾಲಾಕೋಟ್ ನಲ್ಲಿ ಉಗ್ರರ ಕ್ಯಾಂಪ್ ಇಲ್ಲ ಎಂಬ ಪಾಕ್ ವಾದವನ್ನೇ ತಳ್ಳಿಹಾಕಿದ್ದಾನೆ. ಬಾಲಾಕೋಟ್ ನಲ್ಲಿ ಜೆಇಎಂ ಉಗ್ರ ತರಬೇತಿ ಕೇಂದ್ರಗಳನ್ನು ಹೊಂದಿದ್ದು, ಭಾರತದೊಳಗೆ ಉಗ್ರರನ್ನು ಕಳುಹಿಸಲು ಅಲ್ಲಿ ತಯಾರಿ ನಡೆಯುತ್ತಿರುತ್ತದೆ. ಅಲ್ಲದೇ ವಿಶ್ವದೆಲ್ಲಡೆ ದಾಳಿಗಳನ್ನು ನಡೆಸಲು ಸಂಚು ರೂಪಿಸಲಾಗುತ್ತದೆ ಎಂದು ಬಹಿರಂಗಪಡಿಸಿದ್ದಾನೆ.