ಈ ಬಗ್ಗೆ ಮೌಲಾನ ಅಮ್ಮರ್ ಮಾತನಾಡಿರುವ ಆಡಿಯೋ ಕ್ಲಿಪ್ ಒಂದು ಬಿಡುಗಡೆಯಾಗಿದ್ದು, ಆಡಿಯೋದಲ್ಲಿ ಬಾಲ್ಕೋಟ್ ನಲ್ಲಿರುವ ಉಗ್ರ ಶಿಬಿರಗಳನ್ನು ಭಾರತ ನಾಶ ಮಾಡಿದ್ದು ಹೌದು ಎಂದು ಹೇಳಿದ್ದಾನೆ. ಆ ಮೂಲಕ ದಾಳಿಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಬೀಗುತ್ತಿದ್ದ ಪಾಕಿಸ್ತಾನ ಸರ್ಕಾರ ಮತ್ತು ಪಾಕಿಸ್ತಾನ ಸೇನೆಗೆ ಅಮ್ಮರ್ ಹೇಳಿಕೆ ತೀವ್ರ ಇರುಸುಮುರುಸು ಉಂಟುಮಾಡಿದೆ.